ಬಿಜೆಪಿ ಪಕ್ಷಕ್ಕೆ ಕಾರ್ಯಕರ್ತರು ಸೇರ್ಪಡೆ ಕಾರ್ಯಕ್ರಮ :
ಹುಬ್ಬಳ್ಳಿ :
ಬಿಜೆಪಿ ಕಾರ್ಯಾಲಯ ದೇಶಪಾಂಡೆ ನಗರ ಹುಬ್ಬಳ್ಳಿಯಲ್ಲಿ ಹುಬ್ಬಳ್ಳಿ ಧಾರವಾಡ ಸೆಂಟ್ರಲ್ ವಿಧಾನಸಭಾ ಕ್ಷೇತ್ರದ ಚುನಾವಣಾ ಕಾರ್ಯಾಲಯಲದಲ್ಲಿ ಬಿಜೆಪಿ ಪಕ್ಷಕ್ಕೆ ಹುಲಗಪ್ಪ ಚಲವಾದಿ ಉರ್ಫ್ ಕೊಡಾಲ ರವರನ್ನು ಸೇರ್ಪಡೆ ಮಾಡಿಕೊಳ್ಳಲಾಯಿತು. ಈ ಕಾರ್ಯಕ್ರಮವನ್ನು ಕೇಂದ್ರ ಮಂತ್ರಿಗಳಾದ ಸನ್ಮಾನ್ಯ ಶ್ರೀ ಪ್ರಹ್ಲಾದ ಜೋಶಿ ಅವರು ಕ್ಷೇತ್ರದ ಅಭ್ಯರ್ಥಿಯಾದ ಸನ್ಮಾನ್ಯ ಶ್ರೀ ಮಹೇಶ ಟೆಂಗಿನಕಾಯಿರವರು ಸಚಿವರಾದ ಶಂಕರ ಪಾಟೀಲ ಮುನೇನಕೊಪ್ಪ, ವಿಭಾಗೀ ಪ್ರಬಾರಿ ಯಾದ ಲಿಂಗರಾಜ ಪಾಟೀಲ,ಮಾಜಿ ಶಾಸಕರಾದ ಅಶೋಕ ಕಾಟವೆ, ಜಿಲ್ಲಾ ಅಧ್ಯಕ್ಷರಾದ ಸಂಜಯ ಕಪಟಕರ, ಹು ಧಾ ಸೆಂಟ್ರಲ್ ಕ್ಷೇತ್ರದ ಅಧ್ಯಕ್ಷರಾದ ಸಂತೋಷ ಚವ್ಹಾಣ, ಪ್ರಧಾನ ಕಾರ್ಯದರ್ಶಿಗಳಾದ ಅಶೋಕ ವಾಲ್ಮೀಕಿ, ಗೋಪಾಲ ಬದ್ದಿ ಪಕ್ಷದ ಕಾರ್ಯಕರ್ತರು ಉಪಸ್ಥಿತರಿದ್ದರು.
ವರದಿ : ಬಸವರಾಜ ಕಬಡ್ಡಿ