Koppal Election : ಭದ್ರತಾ ಪಡೆಯಿಂದ ಪಥ ಸಂಚಲನ

ಚುನಾವಣೆ : ಭದ್ರತಾ ಪಡೆಯಿಂದ ಪಥ ಸಂಚಲನ
ಕೊಪ್ಪಳ,: ಸಾರ್ವತ್ರಿಕ ವಿಧಾನಸಭಾ ಚುನಾವಣೆ 2023ರ ನಿಮಿತ್ಯ ಕಾನೂನು ಸುವ್ಯವಸ್ಥೆ ಕಾಪಾಡಲು, ಚುನಾವಣೆ ಪ್ರಕ್ರಿಯೆಯು ನ್ಯಾಯಸಮ್ಮತ ಹಾಗೂ ಶಾಂತಿಯುತವಾಗಿ ನಡೆಯಲು ಜಿಲ್ಲಾ ಪೊಲೀಸ್ ಇಲಾಖೆಯಿಂದ ಬುಧವಾರ ನಗರದಲ್ಲಿ ಭದ್ರತಾ ಪಡೆಯ ಪಥಸಂಚಲನ ಜರುಗಿತು.
ಜಿಲ್ಲಾಧಿಕಾರಿ ಎಂ.ಸುಂದರೇಶ ಬಾಬು, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ರತ್ನಂ ಪಾಂಡೆಯ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಯಶೋಧಾ ವಂಟಗೋಡಿ ಅವರು ಹಸಿರು ನಿಶಾನೆ ತೋರಿಸುವುದರ ಮಾಲಕ ಪಥಸಂಚಲನಕ್ಕೆ ಚಾಲನೆ ನೀಡಿದರು.
ಪಥಸಂಚಲನವು ಕೊಪ್ಪಳ ನಗರದ ಬಸ್ ನಿಲ್ದಾಣದಿಂದ ಪ್ರಾರಂಭಗೊಂಡು, ಅಶೋಕ ವೃತ್ತ, ಜವಾಹರ ರಸ್ತೆ ಮೂಲಕ ಗಡಿಯಾರ ಕಂಭ, ಸಾಲಾರಜಂಗ ರಸ್ತೆ ಮೂಲಕ ಈಶ್ವರ ಪಾರ್ಕವರೆಗೆ ನಡೆಯಿತು. ಪಥಸಂಚಲನದಲ್ಲಿ ಚುನಾವಣೆ ಕರ್ತವ್ಯಕ್ಕೆ ಆಗಮಿಸಿದ ಪ್ಯಾರಾ ಮಿಲಿಟರಿ ತುಕಡಿ ಮತ್ತು ಕೊಪ್ಪಳ ಜಿಲ್ಲೆಯ ಪೊಲೀಸ್ ಅಧಿಕಾರಿಗಳು, ಸಿಬ್ಬಂದಿ ವರ್ಗದವರು ಭಾಗವಹಿಸಿದ್ದರು.

ವರದಿ : ಶಿವಕುಮಾರ ಹಿರೇಮಠ
Previous Post Next Post

AD

 


Contact For News&Ads

Siddi TV

Contact Form

f="https://unpkg.com/video.js/dist/video-js.css" rel="stylesheet">