ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಮುಕ್ತಾಯ : ಜೆಡಿಎಸ್ ನಿಂದ ಮಲ್ಲನಗೌಡ ಕೋನನಗೌಡರ್ ,NCP ಯಿಂದ ಆರ್ ಹರೀಶ್ ಕಣಕ್ಕೆ
ಯಲಬುರ್ಗಾ : ನಾಮಪತ್ರ ಸಲ್ಲಿಸಲು ಕೊನೆಯ ದಿನವಾದ ಇಂದು ಒಂದೇ ದಿನ 7 ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದು ಯಲಬುರ್ಗಾ ವಿಧಾನಸಭಾ ಕ್ಷೇತ್ರದಲ್ಲಿ ಒಟ್ಟು 25 ನಾಮಪತ್ರ ಸಲ್ಲಿಕೆಯಾಗಿವೆ.
ಜೆಡಿಎಸ್ ಪಕ್ಷದಿಂದ ಯುವ ನಾಯಕ ಮಲ್ಲನಗೌಡ ಕೋನನಗೌಡರ್ ನಾಮಪತ್ರ ಸಲ್ಲಿಸಿದರೆ,ಎನ್ ಸಿ ಪಿ ಪಕ್ಷದಿಂದ ಆ ಪಕ್ಷದ ರಾಜ್ಯಾಧ್ಯಕ್ಷ ಆರ್ ಹರೀಶ್ ಅವರು ಭರ್ಜರಿ ರೋಡ್ ಶೋ ಮೂಲಕ ಬಂದು ತಮ್ಮ ಉಮೇದುವಾರಿಕೆ ಸಲ್ಲಿಸಿದರು.
ಉಳಿದಂತೆ ಆಮ್ ಆದ್ಮಿ ಪಕ್ಷದಿಂದ ಹಿರಿಯ ಪತ್ರಕರ್ತ ಮೌಲಾ ಹುಸೇನ್ ಬ್ಯುಲ್ಡಿಯಾರ್ ಅಧಿಕೃತ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದರು.
ನಾಮಪತ್ರ ಸಲ್ಲಿಸುವ ಅವಧಿ ಮುಗಿಯುವ ಒಂದು ನಿಮಿಷದ ಮುಂಚೆ ಕೊನೆ ಗಳಿಗೆಯಲ್ಲಿ ಪಕ್ಷೇತರ ಅಭ್ಯರ್ಥಿ ಒಬ್ಬರು ಬಂದು ನಾಮಪತ್ರ ಸಲ್ಲಿಸಿದ್ದು ವಿಶೇಷ ಎನಿಸಿತು.
ಇದರೊಂದಿಗೆ 16 ನೇ ವಿಧಾನಸಭೆ ಚುನಾವಣೆಯ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಪೂರ್ಣಗೊಂಡಿದ್ದು ನಾಮಪತ್ರ ಪರಿಶೀಲನೆ ಪ್ರಕ್ರಿಯೆ ನಂತರ ಅಂತಿಮವಾಗಿ ಕಣದಲ್ಲಿ ಉಳಿಯುವ ಅಭ್ಯರ್ಥಿಗಳತ್ತ ಎಲ್ಲರ ಚಿತ್ತ ನೆಟ್ಟಿದೆ.
ವರದಿ : ಈರಯ್ಯ ಕುರ್ತಕೋಟಿ