ಎಚ್.ಸಿ. ರಾಘವೇಂದ್ರ ಅವರಿಗೆ ಪಿಎಚ್.ಡಿ ಪದವಿ
ಕಂಪ್ಲಿ: ಕಂಪ್ಲಿ ತಾಲೂಕಿನ ರಾಮಸಾಗರ ಗ್ರಾಮದ ಎಚ್.ಸಿ. ರಾಘವೇಂದ್ರ ಅವರಿಗೆ ಹಂಪಿಯ ಕನ್ನಡ ವಿಶ್ವವಿದ್ಯಾಲಯವು ಪಿಎಚ್.ಡಿ ಪದವಿ ನೀಡಿದೆ.
ಅವರು ಕನ್ನಡ ವಿಶ್ವವಿದ್ಯಾಲಯದ ಸಮಾಜ ವಿಜ್ಞಾನ ನಿಕಾಯದ ಅಭಿವೃದ್ಧಿ ಅಧ್ಯಯನ ವಿಭಾಗದಲ್ಲಿ, ಪ್ರಾಧ್ಯಾಪಕರಾದ ಡಾ. ಜನಾರ್ದನ ಅವರ ಮಾರ್ಗದರ್ಶನದಲ್ಲಿ "ಹೈದರಾಬಾದ್ ಕರ್ನಾಟಕ ಪ್ರದೇಶದಲ್ಲಿ ಪೋಷಕತ್ವ ವಂಚಿತ ಮಕ್ಕಳ ಸ್ಥಿತಿಗತಿ" ಎಂಬ ವಿಷಯದ ಮೇಲೆ ಸಂಶೋಧನೆ ನಡೆಸಿ ಮಹಾಪ್ರಬಂಧವನ್ನು ಯಶಸ್ವಿಯಾಗಿ ಸಲ್ಲಿಸಿದ್ದಾರೆ. ವಿಶ್ವವಿದ್ಯಾಲಯವು ಅದನ್ನು ಅತ್ಯುತ್ತಮ ಶ್ರೇಣಿಯಲ್ಲಿ ಮೌಲ್ಯಮಾಪನ ಮಾಡಿದ್ದು, ಪಿಎಚ್.ಡಿ ಪದವಿ ಘೋಷಿಸಿದೆ.
Tags
ಟಾಪ್ ನ್ಯೂಸ್